ತಾಲ್ಲೂಕಿನ 20 ಗ್ರಾಮಗಳಲ್ಲಿ ಹಾದುಹೋಗಿರುವ 220 ಕೆವಿ ವಿದ್ಯುತ್ ಕೇಬಲ್: ಭೂ ಪರಿಹಾರ ಹಣ ಹೆಚ್ಚಿಸಲು ರೈತ ಸಂಘ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.

ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.

ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.

ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

54 minutes ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 day ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 days ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 days ago