ತಾಲ್ಲೂಕಿನ 20 ಗ್ರಾಮಗಳಲ್ಲಿ ಹಾದುಹೋಗಿರುವ 220 ಕೆವಿ ವಿದ್ಯುತ್ ಕೇಬಲ್: ಭೂ ಪರಿಹಾರ ಹಣ ಹೆಚ್ಚಿಸಲು ರೈತ ಸಂಘ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.

ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.

ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.

ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

22 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago