ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.
ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.
ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…