ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.
ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.
ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…