ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.
ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.
ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…