ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ ದ್ವಿಮಾರ್ಗ ಮಾಡುತ್ತಿರುವ ಕೆಪಿಟಿಸಿಎಸ್ ಏಕಮುಖ ನಿರ್ಧಾರವನ್ನ ಖಂಡಿಸಿ ಮತ್ತು ರೈತರಿಂದ ವಶಕ್ಕೆ ಪಡೆಯುತ್ತಿರುವ ಭೂಮಿಗೆ ವೈಜ್ಞಾನಿಕ ದರ ನಿಗದಿಗೆ ಒತ್ತಾಯಿಸಿ ಮಾ.30ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.
ನಗರದ ಎಪಿಎಂಸಿ ಮಾರುಕಟ್ಟೆಯ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾಮಗಳ ಮೂಲಕ ಗೌರಿಬಿದನೂರಿಗೆ 220 ಕೆವಿ ಹಾದುಹೋಗಿದೆ. ಈ ಹಿಂದೆ ಏಕರ್ಮಾಗದ ಕಾರಿಡಾರ್ ನಿರ್ಮಿಸಿ ರೈತರಿಗೆ 60 ವರ್ಷದವರೆಗೆ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದ್ದರು. ಕೆಪಿಟಿಸಿಎಸ್ ಇದೀಗ ಏಕಾಏಕಿ ದ್ವಿಮಾರ್ಗ ಕಾರಿಡಾರ್ ಮಾಡಲು ಹೊರಟಿದೆ. ಇದಕ್ಕಾಗಿ ರೈತರಿಗೆ ನೀಡಬೇಕಾದ ಪರಿಹಾರ ಧನವನ್ನು ಅವೈಜ್ಞಾನಿಕವಾಗಿ ನಿಗದಿ ಮಾಡಲಾಗಿದೆ ಇದು ರೈತರಿಗೆ ಮಾರಕವಾಗಲಿದೆ ಎಂದರು.
ಬಮುಲ್ ನಿರ್ದೇಶಕ ಸತೀಶ್ ಮಾತನಾಡಿ, ಯಲಹಂಕದಲ್ಲಿ ಭೂಗತವಾಗಿ ಕೇಬಲ್ ಅಳವಡಿಸಲಾಗಿದೆ. ಖಾಸಗಿ ಬೃಹತ್ ಕಂಪನಿಯಾದ ಫಾಕ್ಸ್ ಕಾನ್ ಗೆ ಭೂಗತವಾಗಿ ವಿದ್ಯುತ್ ಸಂಪರ್ಕವನ್ನ ಸರ್ಕಾರ ನೀಡಿದೆ. ಆದರೆ ರೈತರಿಗೆ ಮಾತ್ರ ವಿದ್ಯುತ್ ಲೈನ್ ಗಳನ್ನು ಹಾಕುವ ಮೂಲಕ ಹೊಲಗಳಿಗೆ ಬೇಲಿ ಹಾಕುತ್ತಿದೆ.
ರೈತರಿಗೆ ಬಿಡಿಗಾಸು ಕೊಡುವುದನ್ನು ಬಿಟ್ಟು ಮಾರುಕಟ್ಟೆ ಬೆಲೆಯಂತೆ ದರವನ್ನು ನೀಡಬೇಕು. ಅವೈಜ್ಞಾನಿಕ ನೀತಿಯನ್ನ ಬಿಡಬೇಕು ಇಲ್ಲವಾದಲ್ಲಿ ಮಾ.೩೦ ರಂದು ಪ್ರತಿಭಟನೆ ಮಾಡುವುದು ಖಚಿತ ಎಂದರು.
ಈ ವೇಳೆ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಹನುಮೇಗೌಡ, ತಿ.ರಂಗರಾಜು, ಬಮುಲ್ ನಿರ್ದೇಶಕ ಸತೀಶ್ ಮತ್ತಿತ್ತರರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…