ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಶೇ100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ಮಾತನಾಡಿ, ಮಹಿಳೆಯರ ಮತ್ತು ಯುವ ಸಮುದಾಯದ ಸಬಲೀಕರಣಕ್ಕಾಗಿ ದೇಶದಲ್ಲಿಯೇ ಮಹತ್ವಕಾಂಕ್ಷೆ ಪಂಚಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯ ಕರ್ನಾಟಕವಾಗಿದೆ. ಸಾಮಾಜಿಕ ಚಿಂತನೆಯೊಂದಿಗೆ ಈ ಯೋಜನೆ ಸರ್ಕಾರ ರೂಪಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೇ100 ರಷ್ಟು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ಮಾತನಾಡಿ, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಸ್ತೃತ ಪ್ರಚಾರ ಕೈಗೊಂಡು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.

ಶಕ್ತಿ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ 73 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು, ಸರ್ಕಾರ 21.56 ಕೋಟಿ ರೂ.ಗಳನ್ನು ಭರಿಸಿದೆ.

ಗೃಹ ಜ್ಯೋತಿ ಯೋಜನೆಯಡಿ 844439 ಗೃಹಗಳಿಗೆ ಸಂಪರ್ಕಕ್ಕೆ ಪ್ರತಿ ಮಾಹೆ 3.24 ಕೋಟಿ ಹಣ ಸರ್ಕಾರ ಭರಿಸುತ್ತಿದೆ.

ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ 64249 ಫಲಾನುಭವಿಗಳಿದ್ದು ಜಿಲ್ಲೆಗೆ ಇದುವರೆವಿಗೂ 417 ಕೋಟಿ ರೂ ಹಣವನ್ನು ಗೃಹಲಕ್ಷ್ಮಿಯರಿಗೆ ಬಿಡುಗಡೆ ಮಾಡಿದ್ದು, ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಸಿದೆ.

ಅನ್ನ ಭಾಗ್ಯ ಯೋಜನೆಯಡಿ 62836 ಪಡಿತರ ಚೀಟಿಗಳಿಗೆ ಆಹಾರದ ಜೊತೆಗೆ ಹಣ ನೀಡಲಾಗುತ್ತಿದೆ. ಬಾಕಿ ಇರುವ ಹೊಸ ಪಡಿತರ ಚೀಟಿಗಳನ್ನು ತ್ವರಿತವಾಗಿ ವಿತರಿಸಬೇಕು. ಯುವ ನಿಧಿಯಡಿ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ ನಿರುದ್ಯೋಗಿ ಯುವಕ ಯುವತಿಯರು ಪೋರ್ಟಲ್ ನಲ್ಲಿ ನೋಂದಾಯಿಸಲು ವ್ಯಾಪಕ ಪ್ರಚಾರ ಮಾಡಬೇಕೆಂದು ತಿಳಿಸಿದರು.

ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 hour ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

9 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

12 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

15 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

16 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

18 hours ago