ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಶೇ100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ಮಾತನಾಡಿ, ಮಹಿಳೆಯರ ಮತ್ತು ಯುವ ಸಮುದಾಯದ ಸಬಲೀಕರಣಕ್ಕಾಗಿ ದೇಶದಲ್ಲಿಯೇ ಮಹತ್ವಕಾಂಕ್ಷೆ ಪಂಚಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯ ಕರ್ನಾಟಕವಾಗಿದೆ. ಸಾಮಾಜಿಕ ಚಿಂತನೆಯೊಂದಿಗೆ ಈ ಯೋಜನೆ ಸರ್ಕಾರ ರೂಪಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೇ100 ರಷ್ಟು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ಮಾತನಾಡಿ, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಸ್ತೃತ ಪ್ರಚಾರ ಕೈಗೊಂಡು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.

ಶಕ್ತಿ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ 73 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು, ಸರ್ಕಾರ 21.56 ಕೋಟಿ ರೂ.ಗಳನ್ನು ಭರಿಸಿದೆ.

ಗೃಹ ಜ್ಯೋತಿ ಯೋಜನೆಯಡಿ 844439 ಗೃಹಗಳಿಗೆ ಸಂಪರ್ಕಕ್ಕೆ ಪ್ರತಿ ಮಾಹೆ 3.24 ಕೋಟಿ ಹಣ ಸರ್ಕಾರ ಭರಿಸುತ್ತಿದೆ.

ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ 64249 ಫಲಾನುಭವಿಗಳಿದ್ದು ಜಿಲ್ಲೆಗೆ ಇದುವರೆವಿಗೂ 417 ಕೋಟಿ ರೂ ಹಣವನ್ನು ಗೃಹಲಕ್ಷ್ಮಿಯರಿಗೆ ಬಿಡುಗಡೆ ಮಾಡಿದ್ದು, ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಸಿದೆ.

ಅನ್ನ ಭಾಗ್ಯ ಯೋಜನೆಯಡಿ 62836 ಪಡಿತರ ಚೀಟಿಗಳಿಗೆ ಆಹಾರದ ಜೊತೆಗೆ ಹಣ ನೀಡಲಾಗುತ್ತಿದೆ. ಬಾಕಿ ಇರುವ ಹೊಸ ಪಡಿತರ ಚೀಟಿಗಳನ್ನು ತ್ವರಿತವಾಗಿ ವಿತರಿಸಬೇಕು. ಯುವ ನಿಧಿಯಡಿ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ ನಿರುದ್ಯೋಗಿ ಯುವಕ ಯುವತಿಯರು ಪೋರ್ಟಲ್ ನಲ್ಲಿ ನೋಂದಾಯಿಸಲು ವ್ಯಾಪಕ ಪ್ರಚಾರ ಮಾಡಬೇಕೆಂದು ತಿಳಿಸಿದರು.

ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

5 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

17 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago