ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಶೇ100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ಮಾತನಾಡಿ, ಮಹಿಳೆಯರ ಮತ್ತು ಯುವ ಸಮುದಾಯದ ಸಬಲೀಕರಣಕ್ಕಾಗಿ ದೇಶದಲ್ಲಿಯೇ ಮಹತ್ವಕಾಂಕ್ಷೆ ಪಂಚಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯ ಕರ್ನಾಟಕವಾಗಿದೆ. ಸಾಮಾಜಿಕ ಚಿಂತನೆಯೊಂದಿಗೆ ಈ ಯೋಜನೆ ಸರ್ಕಾರ ರೂಪಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೇ100 ರಷ್ಟು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ಮಾತನಾಡಿ, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಸ್ತೃತ ಪ್ರಚಾರ ಕೈಗೊಂಡು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.

ಶಕ್ತಿ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ 73 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು, ಸರ್ಕಾರ 21.56 ಕೋಟಿ ರೂ.ಗಳನ್ನು ಭರಿಸಿದೆ.

ಗೃಹ ಜ್ಯೋತಿ ಯೋಜನೆಯಡಿ 844439 ಗೃಹಗಳಿಗೆ ಸಂಪರ್ಕಕ್ಕೆ ಪ್ರತಿ ಮಾಹೆ 3.24 ಕೋಟಿ ಹಣ ಸರ್ಕಾರ ಭರಿಸುತ್ತಿದೆ.

ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ 64249 ಫಲಾನುಭವಿಗಳಿದ್ದು ಜಿಲ್ಲೆಗೆ ಇದುವರೆವಿಗೂ 417 ಕೋಟಿ ರೂ ಹಣವನ್ನು ಗೃಹಲಕ್ಷ್ಮಿಯರಿಗೆ ಬಿಡುಗಡೆ ಮಾಡಿದ್ದು, ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಸಿದೆ.

ಅನ್ನ ಭಾಗ್ಯ ಯೋಜನೆಯಡಿ 62836 ಪಡಿತರ ಚೀಟಿಗಳಿಗೆ ಆಹಾರದ ಜೊತೆಗೆ ಹಣ ನೀಡಲಾಗುತ್ತಿದೆ. ಬಾಕಿ ಇರುವ ಹೊಸ ಪಡಿತರ ಚೀಟಿಗಳನ್ನು ತ್ವರಿತವಾಗಿ ವಿತರಿಸಬೇಕು. ಯುವ ನಿಧಿಯಡಿ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ ನಿರುದ್ಯೋಗಿ ಯುವಕ ಯುವತಿಯರು ಪೋರ್ಟಲ್ ನಲ್ಲಿ ನೋಂದಾಯಿಸಲು ವ್ಯಾಪಕ ಪ್ರಚಾರ ಮಾಡಬೇಕೆಂದು ತಿಳಿಸಿದರು.

ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

8 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

8 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

10 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

13 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

15 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

19 hours ago