ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ಮಾತನಾಡಿ, ಮಹಿಳೆಯರ ಮತ್ತು ಯುವ ಸಮುದಾಯದ ಸಬಲೀಕರಣಕ್ಕಾಗಿ ದೇಶದಲ್ಲಿಯೇ ಮಹತ್ವಕಾಂಕ್ಷೆ ಪಂಚಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯ ಕರ್ನಾಟಕವಾಗಿದೆ. ಸಾಮಾಜಿಕ ಚಿಂತನೆಯೊಂದಿಗೆ ಈ ಯೋಜನೆ ಸರ್ಕಾರ ರೂಪಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೇ100 ರಷ್ಟು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ಮಾತನಾಡಿ, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯಗಳನ್ನು ತಲುಪಿಸುವಲ್ಲಿ ವಿಸ್ತೃತ ಪ್ರಚಾರ ಕೈಗೊಂಡು ಪ್ರಗತಿ ಸಾಧಿಸಲು ವಿಶೇಷ ಗಮನ ನೀಡಬೇಕೆಂದು ತಿಳಿಸಿದರು.
ಶಕ್ತಿ ಯೋಜನೆಯಡಿ ತಾಲ್ಲೂಕು ವ್ಯಾಪ್ತಿಯಲ್ಲಿ 73 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದು, ಸರ್ಕಾರ 21.56 ಕೋಟಿ ರೂ.ಗಳನ್ನು ಭರಿಸಿದೆ.
ಗೃಹ ಜ್ಯೋತಿ ಯೋಜನೆಯಡಿ 844439 ಗೃಹಗಳಿಗೆ ಸಂಪರ್ಕಕ್ಕೆ ಪ್ರತಿ ಮಾಹೆ 3.24 ಕೋಟಿ ಹಣ ಸರ್ಕಾರ ಭರಿಸುತ್ತಿದೆ.
ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ 64249 ಫಲಾನುಭವಿಗಳಿದ್ದು ಜಿಲ್ಲೆಗೆ ಇದುವರೆವಿಗೂ 417 ಕೋಟಿ ರೂ ಹಣವನ್ನು ಗೃಹಲಕ್ಷ್ಮಿಯರಿಗೆ ಬಿಡುಗಡೆ ಮಾಡಿದ್ದು, ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಸಿದೆ.
ಅನ್ನ ಭಾಗ್ಯ ಯೋಜನೆಯಡಿ 62836 ಪಡಿತರ ಚೀಟಿಗಳಿಗೆ ಆಹಾರದ ಜೊತೆಗೆ ಹಣ ನೀಡಲಾಗುತ್ತಿದೆ. ಬಾಕಿ ಇರುವ ಹೊಸ ಪಡಿತರ ಚೀಟಿಗಳನ್ನು ತ್ವರಿತವಾಗಿ ವಿತರಿಸಬೇಕು. ಯುವ ನಿಧಿಯಡಿ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿದ ನಿರುದ್ಯೋಗಿ ಯುವಕ ಯುವತಿಯರು ಪೋರ್ಟಲ್ ನಲ್ಲಿ ನೋಂದಾಯಿಸಲು ವ್ಯಾಪಕ ಪ್ರಚಾರ ಮಾಡಬೇಕೆಂದು ತಿಳಿಸಿದರು.
ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…