ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ನಾಲ್ಕು ತಾಲ್ಲೂಕಿನಲ್ಲೂ ಏಕಕಾಲದಲ್ಲಿ ಚಾಲನೆ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.21, 22 ರಂದು ಏಕಕಾಲದಲ್ಲಿ ನಡೆಸಲಾಗುತ್ತಿದ್ದು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಆಯೋಜಿಸಲಾಗುವ ಕ್ರೀಡೆಗಳ ವಿವರ 

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ

ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ

ಫುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ,

ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಯೋಗ – ಪುರುಷ ಮತ್ತು ಮಹಿಳೆಯರಿಗೆ

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ, ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ

ಷರತ್ತು ಮತ್ತು ನಿಬಂಧನೆಗಳು

ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆ ರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್/ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ)

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು.  ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು.ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿರಬೇಕು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್ ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

 ಹೆಚ್ಚಿನ ಮಾಹಿತಿಗಾಗಿ

1.ಸುನಿಲ್‌ನಾಯ್ಕ ದೈಹಿಕ ಶಿಕ್ಷಣ ಪರಿವೀಕ್ಷಕರು, ದೊಡ್ಡಬಳ್ಳಾಪುರ ತಾಲ್ಲೂಕು 9449375395,

2.ವೆಂಕಟೇಶ್.ಟಿ ದೈಹಿಕ ಶಿಕ್ಷಣ ಪರಿವೀಕ್ಷಕರು, ದೇವನಹಳ್ಳಿ ತಾಲ್ಲೂಕು 9740182577,

3.ರವಿಕುಮಾರ್ 3.ದೈಹಿಕ ಶಿಕ್ಷಣ ಪರಿವೀಕ್ಷಕರು, ನೆಲಮಂಗಲ ತಾಲ್ಲೂಕು 9880781906,

4.ಜಗದೀಶ್ ದೈಹಿಕ ಶಿಕ್ಷಣ ಪರಿವೀಕ್ಷಕರು, ಹೊಸಕೋಟೆ ತಾಲ್ಲೂಕು 9141125857 ಸಂಪರ್ಕಿಸಬಹುದು ಎಂದು

ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

3 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

4 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

9 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

21 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

22 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

22 hours ago