ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ನಾಲ್ಕು ತಾಲ್ಲೂಕಿನಲ್ಲೂ ಏಕಕಾಲದಲ್ಲಿ ಚಾಲನೆ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.21, 22 ರಂದು ಏಕಕಾಲದಲ್ಲಿ ನಡೆಸಲಾಗುತ್ತಿದ್ದು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಆಯೋಜಿಸಲಾಗುವ ಕ್ರೀಡೆಗಳ ವಿವರ 

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ

ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ

ಫುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ,

ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಯೋಗ – ಪುರುಷ ಮತ್ತು ಮಹಿಳೆಯರಿಗೆ

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ, ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ

ಷರತ್ತು ಮತ್ತು ನಿಬಂಧನೆಗಳು

ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆ ರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್/ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ)

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು.  ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು.ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿರಬೇಕು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್ ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

 ಹೆಚ್ಚಿನ ಮಾಹಿತಿಗಾಗಿ

1.ಸುನಿಲ್‌ನಾಯ್ಕ ದೈಹಿಕ ಶಿಕ್ಷಣ ಪರಿವೀಕ್ಷಕರು, ದೊಡ್ಡಬಳ್ಳಾಪುರ ತಾಲ್ಲೂಕು 9449375395,

2.ವೆಂಕಟೇಶ್.ಟಿ ದೈಹಿಕ ಶಿಕ್ಷಣ ಪರಿವೀಕ್ಷಕರು, ದೇವನಹಳ್ಳಿ ತಾಲ್ಲೂಕು 9740182577,

3.ರವಿಕುಮಾರ್ 3.ದೈಹಿಕ ಶಿಕ್ಷಣ ಪರಿವೀಕ್ಷಕರು, ನೆಲಮಂಗಲ ತಾಲ್ಲೂಕು 9880781906,

4.ಜಗದೀಶ್ ದೈಹಿಕ ಶಿಕ್ಷಣ ಪರಿವೀಕ್ಷಕರು, ಹೊಸಕೋಟೆ ತಾಲ್ಲೂಕು 9141125857 ಸಂಪರ್ಕಿಸಬಹುದು ಎಂದು

ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

9 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

18 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

22 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago