ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ನಾಲ್ಕು ತಾಲ್ಲೂಕಿನಲ್ಲೂ ಏಕಕಾಲದಲ್ಲಿ ಚಾಲನೆ

2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.21, 22 ರಂದು ಏಕಕಾಲದಲ್ಲಿ ನಡೆಸಲಾಗುತ್ತಿದ್ದು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಆಯೋಜಿಸಲಾಗುವ ಕ್ರೀಡೆಗಳ ವಿವರ 

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ

ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ

ಫುಟ್ಬಾಲ್ – ಪುರುಷರಿಗೆ,

ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ,

ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಯೋಗ – ಪುರುಷ ಮತ್ತು ಮಹಿಳೆಯರಿಗೆ

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ, ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ

ಷರತ್ತು ಮತ್ತು ನಿಬಂಧನೆಗಳು

ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆ ರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.  ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್/ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ)

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು.  ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು.ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿರಬೇಕು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್ ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.

 ಹೆಚ್ಚಿನ ಮಾಹಿತಿಗಾಗಿ

1.ಸುನಿಲ್‌ನಾಯ್ಕ ದೈಹಿಕ ಶಿಕ್ಷಣ ಪರಿವೀಕ್ಷಕರು, ದೊಡ್ಡಬಳ್ಳಾಪುರ ತಾಲ್ಲೂಕು 9449375395,

2.ವೆಂಕಟೇಶ್.ಟಿ ದೈಹಿಕ ಶಿಕ್ಷಣ ಪರಿವೀಕ್ಷಕರು, ದೇವನಹಳ್ಳಿ ತಾಲ್ಲೂಕು 9740182577,

3.ರವಿಕುಮಾರ್ 3.ದೈಹಿಕ ಶಿಕ್ಷಣ ಪರಿವೀಕ್ಷಕರು, ನೆಲಮಂಗಲ ತಾಲ್ಲೂಕು 9880781906,

4.ಜಗದೀಶ್ ದೈಹಿಕ ಶಿಕ್ಷಣ ಪರಿವೀಕ್ಷಕರು, ಹೊಸಕೋಟೆ ತಾಲ್ಲೂಕು 9141125857 ಸಂಪರ್ಕಿಸಬಹುದು ಎಂದು

ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

6 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

9 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

11 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago