Categories: ರಾಜ್ಯ

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಪ್ರಕರಣ ನ್ಯಾಯಾಲಯದಲ್ಲಿದೆ- ತೀರ್ಪಿನ ನಂತರ ಚುನಾವಣೆ- ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಆರ್.ಎಸ್.ಎಸ್. ನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೆ. ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದು ಹೇಳಿದರು.

ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬಿನ ಬೆಲೆ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು. 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಹೇಳಿದರು.

ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದು ಹೇಳಿದರು.

ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ. ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ ಎಂದರು.

ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ. FRP ಮತ್ತು MSP ಎರಡನ್ನೂ ನಿಗದಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 minute ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

12 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

12 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

13 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

13 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

20 hours ago