ತಾಳಿ ಕಟ್ಟಿದ ಗಂಡನ ಮೇಲೆ ಹಲ್ಲೆ ನಡೆಸಲು ಪ್ರಿಯಕರನಿಗೆ ಮಚ್ಚು ಕೊಟ್ಟ ಹೆಂಡತಿ? ರೊಚ್ಚಿಗೆದ್ದ ಪ್ರಿಯಕರ ಮಚ್ಚಿನಿಂದ ಹಲ್ಲೆ

ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ‌ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.

ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ‌, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಗೊಂದಲವಾಗಬಾರದೆಂಬ ಕಾರಣ ಗುರುವಾರ ಸಂಜೆ ಅಶೋಕ್ ಮತ್ತು ಅವರ ಸಹೋದರ ಮಕ್ಕಳನ್ನು ಮೇಘಾ ಅವರ ಬಳಿ ಬಿಟ್ಟು ಬರಲೆಂದು ಕೊನಘಟ್ಟ ಗ್ರಾಮದಲ್ಲಿ ವಾಸವಿದ್ದ ಮೇಘಾ – ಮಧನ್ ಮನೆಯ ಬಳಿ ಬಂದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು, ಮೇಘಾ ನೀಡಿದ ಮಚ್ಚನ್ನು ಮಧನ್, ಅಶೋಕ್ ಮೇಲೆ ಬೀಸಿದ್ದು ಅಶೋಕ್ ಅವರ ಕೈಗೆ ತೀವ್ರ ಪೆಟ್ಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago