ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.
ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…