ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.
ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…