ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.
ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…