ತಾಳಿ ಕಟ್ಟಿದ ಗಂಡನ ಮೇಲೆ ಹಲ್ಲೆ ನಡೆಸಲು ಪ್ರಿಯಕರನಿಗೆ ಮಚ್ಚು ಕೊಟ್ಟ ಹೆಂಡತಿ? ರೊಚ್ಚಿಗೆದ್ದ ಪ್ರಿಯಕರ ಮಚ್ಚಿನಿಂದ ಹಲ್ಲೆ

ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ‌ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.

ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ‌, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಗೊಂದಲವಾಗಬಾರದೆಂಬ ಕಾರಣ ಗುರುವಾರ ಸಂಜೆ ಅಶೋಕ್ ಮತ್ತು ಅವರ ಸಹೋದರ ಮಕ್ಕಳನ್ನು ಮೇಘಾ ಅವರ ಬಳಿ ಬಿಟ್ಟು ಬರಲೆಂದು ಕೊನಘಟ್ಟ ಗ್ರಾಮದಲ್ಲಿ ವಾಸವಿದ್ದ ಮೇಘಾ – ಮಧನ್ ಮನೆಯ ಬಳಿ ಬಂದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು, ಮೇಘಾ ನೀಡಿದ ಮಚ್ಚನ್ನು ಮಧನ್, ಅಶೋಕ್ ಮೇಲೆ ಬೀಸಿದ್ದು ಅಶೋಕ್ ಅವರ ಕೈಗೆ ತೀವ್ರ ಪೆಟ್ಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago