ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.
ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…