ತಾಳಿ ಕಟ್ಟಿದ ಗಂಡನ ಮೇಲೆ ಹಲ್ಲೆ ನಡೆಸಲು ಪ್ರಿಯಕರನಿಗೆ ಮಚ್ಚು ಕೊಟ್ಟ ಹೆಂಡತಿ? ರೊಚ್ಚಿಗೆದ್ದ ಪ್ರಿಯಕರ ಮಚ್ಚಿನಿಂದ ಹಲ್ಲೆ

ತನ್ನ ಗಂಡನ ಮೇಲೆ ಹಲ್ಲೆ ನಡೆಸುವಂತೆ ಪ್ರಿಯಕರನಿಗೆ ಮಚ್ಚು ಕೊಟ್ಟು ಕಳುಹಿಸಿದ ಮಹಿಳೆ?. ಪ್ರಿಯತಮೆ ಮಾತಿಗೆ ರೊಚ್ಚಿಗೆದ್ದು ಪ್ರಿಯತಮೆ ಗಂಡನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ದೇವನಹಳ್ಳಿ ತಾಲೂಕಿನ ದೊಡ್ಡಚಿಮ್ಮನಹಳ್ಳಿ ಗ್ರಾಮದ ಅಶೋಕ್ ಎಂಬಾತನಿಗೆ ವಿಶ್ವನಾಥಪುರದ ವಾಸಿ ಮಧನ್ ಎಂಬುವನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಾಳಿ ಕಟ್ಟಿದ ಅಶೋಕ್ ಎಂಬಾತನಿಂದ ದೂರವಾಗಿ ಮಧನ್ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳಸಿಕೊಂಡಿದ್ದ ಅಶೋಕ್ ಮಡದಿ‌ ಮೇಘಾ, ಗಂಡನಿಂದ ದೂರವಾಗಿ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರಿಯತಮ ಮಧನ್ ಜೊತೆ ವಾಸವಿದ್ದರು. ಅಶೋಕ್ ಹಾಗೂ ಮೇಘಾ ದಂಪತಿಗೆ ಇಬ್ಬರು ಮಕ್ಕಳು ಇರುತ್ತಾರೆ. ಈ ಮಕ್ಕಳು ಕೊನಘಟ್ಟ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ ಎಂಬ ಮಾಹಿತಿ ಕೆಲ ಮೂಲಗಳಿಂದ ತಿಳಿದು ಬಂದಿದೆ.

ಮೇಘಾ – ಅಶೋಕ್ ಅವರ ಎರಡು ಮಕ್ಕಳು ಅಶೋಕ್ ಜೊತೆಯಿದ್ದು, ಶಾಲೆಗೆ ಅಶೋಕ್ ಕರೆದೊಯ್ದರೆ‌, ಕೆಲವೊಮ್ಮೆ ಮೇಘಾ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಾರೆ ಎಂಬ ಆತಂಕ, ಆಕ್ಷೇಪ ಶಾಲೆಯವರದ್ದೆನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಗೊಂದಲವಾಗಬಾರದೆಂಬ ಕಾರಣ ಗುರುವಾರ ಸಂಜೆ ಅಶೋಕ್ ಮತ್ತು ಅವರ ಸಹೋದರ ಮಕ್ಕಳನ್ನು ಮೇಘಾ ಅವರ ಬಳಿ ಬಿಟ್ಟು ಬರಲೆಂದು ಕೊನಘಟ್ಟ ಗ್ರಾಮದಲ್ಲಿ ವಾಸವಿದ್ದ ಮೇಘಾ – ಮಧನ್ ಮನೆಯ ಬಳಿ ಬಂದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು, ಮೇಘಾ ನೀಡಿದ ಮಚ್ಚನ್ನು ಮಧನ್, ಅಶೋಕ್ ಮೇಲೆ ಬೀಸಿದ್ದು ಅಶೋಕ್ ಅವರ ಕೈಗೆ ತೀವ್ರ ಪೆಟ್ಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago