Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

3 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

14 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

24 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago