Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

9 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

9 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

12 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

20 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

22 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago