Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago