ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.
ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….
ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.
ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.
ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.
ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.
ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.
ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.
ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.
ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…