ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.
ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….
ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.
ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.
ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.
ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.
ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.
ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.
ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.
ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…