Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

50 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago