Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

6 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

7 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago