Categories: ಹಾಸನ

ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪ್ರಕರಣಕ್ಕೆ ಟ್ವಿಸ್ಟ್: ತಾನು ಪ್ರೀತಿಸಿದ ಪ್ರಿಯಕರನನ್ನೇ ವರಿಸಿದ ವಧು: ಕಣ್ಣೀರು ಸುರಿಸಿದ ವರ

ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯ ಕಂಡಿದೆ. ಕಡೆಗೂ ವಧುವಿನ ಇಚ್ಛೆಯಂತೆ ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹ ನಡೆದಿದೆ.

ಆದರೆ, ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ ಕಲ್ಯಾಣ ಮಂಟಪದಿಂದ ಹೊರ ನಡೆದು ವಧುವಿಗೆ ನೀಡಿದ ಒಡವೆ, ಧಾರೆ ಸೀರೆ, ಖರ್ಚು ಮಾಡಿದ ಹಣ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ….

ಮದುವೆ ಮುರಿದು ಬಿದ್ದಿದ್ದರಿಂದ ವಧುವಿನ ಪೋಷಕರ ಆಘಾತಕ್ಕೆ ಒಳಗಾಗಿದ್ದರು. ಆದರೆ ಮಗಳ ಒತ್ತಾಯಕ್ಕೆ ಮಣಿದು ಆಕೆ ಇಷ್ಟಪಟ್ಟಿದ್ದವನ ಜೊತೆ ಒಲ್ಲದ ಮನಸ್ಸಿನಿಂದಲೇ ಮದುವೆ ನೆರವೇರಿಸಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿಯ ಪಲ್ಲವಿ ಮತ್ತು ಆಲೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೇಣುಗೋಪಾಲ ಜಿ. ನಡುವೆ ಮೂರು ತಿಂಗಳ ಹಿಂದೆಯೇ ಮದುವೆ ನಿಶ್ಚಯವಾಗಿತ್ತು.

ಗುರು ಹಿರಿಯರ ನಿಶ್ಚಯದಂತೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟದಲ್ಲಿ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು.

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಪಲ್ಲವಿ ನನಗೆ ಈ ಮದುವೆ ಇಷ್ಟ ಇಲ್ಲ ಎಂದು ಪಟ್ಟು ಹಿಡಿದ ಕಾರಣ ಮದುವೆ ಮುರಿದು ಬಿದ್ದಿತ್ತು.

ಯಾರು ಎಷ್ಟೇ ಮನವೊಲಿಸಿದರೂ ಮನಸ್ಸು ಬದಲಾಯಿಸಲಿಲ್ಲ. ಕಡೆಗೆ ತಾಯಿ ಹಾಗೂ ವರ ಕೇಳಿಕೊಂಡರೂ ಪಲ್ಲವಿ ಮನಸ್ಸು ಕರಗಲಿಲ್ಲ. ಪರಿಣಾಮ ಮದುವೆ ಮುರಿದು ಬಿದ್ದಿತ್ತು. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಯಾವುದೇ ಫಲಪ್ರದ ಆಗಲಿಲ್ಲ. ಪಲ್ಲವಿ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವೆ ಎಂದು ಪೊಲೀಸರ ಮುಂದೆಯೂ ತಿಳಿಸಿದ್ದಳು.

ಇಷ್ಟೆಲ್ಲಾ ಬೆಳವಣಿಗೆ ಬಳಿಕ ರಾತ್ರಿ ವೇಳೆಗೆ ತಾನು ಪ್ರೀತಿಸಿದ ಯುವಕನೊಂದಿಗೆ ಪಲ್ಲವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾಳೆ.

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಕಲ್ಯಾಣಮಂಟಪಕ್ಕೆ ಹೊಂದಿಕೊಂಡಿರುವ ಗಣಪತಿ ದೇವಾಲಯದಲ್ಲಿ ಮಗಳ ಇಚ್ಛೆಯಂತೆಯೇ ಪ್ರಿಯಕರ ರಘು ಜೊತೆ ಪೋಷಕರು ಸರಳ ವಿವಾಹ ನೆರವೇರಿಸಿದರು.

ಪ್ರಿಯತಮೆ ಪಲ್ಲವಿಗೆ ಪ್ರಿಯಕರ ರಘು ತಾಳಿ ಕಟ್ಟಿದ್ದು, ಇದಕ್ಕೆ ಎರಡೂ ಕಡೆಯ ಕುಟುಂಬಸ್ಥರು ಸಾಕ್ಷಿಯಾದರು. ರಘು ಮೂಲತಃ ಹಾಸನ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವನಾಗಿದ್ದು, ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್ ಮಾಡಿಕೊಂಡಿದ್ದಾನೆ. ಹಲವು ತಿಂಗಳುಗಳಿಂದ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದನ್ನು ಹೆತ್ತವರ ಬಳಿ ಹೇಳಿಕೊಳ್ಳಲು ಪಲ್ಲವಿಗೆ ಧೈರ್ಯ ಇರಲಿಲ್ಲ. ಪರಿಣಾಮ ಮದುವೆಗೆ ಒಪ್ಪಿಕೊಂಡಿದ್ದಳು. ಈ ಸಂದರ್ಭದಲ್ಲಿ ಪ್ರಿಯಕರ ಕರೆ ಮಾಡಿ ನಾನೇ ನಿನ್ನನ್ನು ಮದುವೆ ಆಗುವೆ ಎಂದು ಹೇಳಿದ ನಂತರ ಕಡೇ ಕ್ಷಣದಲ್ಲಿ ತಾಳಿ ಕಟ್ಟಿಕೊಳ್ಳಲು ನಿರಾಕರಿಸಿದ್ದರಿಂದ ಮದುವೆ ಮುರಿದು ಬಿದ್ದಿತ್ತು. ಈಗ ಪರಸ್ಪರ ಪ್ರೀತಿಸಿದ್ದ ಜೋಡಿಗಳು ಒಂದಾಗಿವೆ.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

7 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

7 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

9 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

12 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

14 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

18 hours ago