ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ವ್ಯಾಪ್ತಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ  ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ‌.

ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್‌ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.

ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72

ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ  ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ  ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16   ಸೋಮವಾರ ಸಂಜೆ 5 ಗಂಟೆಯ ಒಳಗಾಗಿ  ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್‌ಸೈಟ್‌ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು  ಸಲ್ಲಿಸಬಹುದು.

ಖುದ್ದಾಗಿ ಇಲ್ಲವೆ ಅಂಚೆ  ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.

ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

2 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

3 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

4 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

6 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

9 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

12 hours ago