ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ.
ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.
ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72
ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16 ಸೋಮವಾರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್ಸೈಟ್ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…