ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ.
ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.
ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72
ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16 ಸೋಮವಾರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್ಸೈಟ್ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…