ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ.
ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.
ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72
ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16 ಸೋಮವಾರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್ಸೈಟ್ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…