ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 72 ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ 25 ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿದೆ.
ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ,ಗಡಿಗಳ ಕುರಿತ ವಿವರಗಳನ್ನು ಆಯೋಗದ ವೆಬ್ಸೈಟ್ rdpr.Karnataka.gov.in/rdc/public ನಲ್ಲಿ ಪ್ರಕಟಿಸಲಾಗಿದೆ.
ತಾ.ಪಂಸದಸ್ಯರ ಸಂಖ್ಯೆ: ನೆಲಮಂಗಲ-15,
ದೇವನಹಳ್ಳಿ-15, ದೊಡ್ಡಬಳ್ಳಾಪುರ-20,ಹೊಸಕೋಟೆ-22 , ಒಟ್ಟು-72
ಜಿ.ಪಂ.ಸದಸ್ಯರ ಸಂಖ್ಯೆ: ನೆಲಮಂಗಲ-5 ,ದೇವನಹಳ್ಳಿ-5,ದೊಡ್ಡಬಳ್ಳಾಪುರ-7,
ಹೊಸಕೋಟೆ-8 ,ಒಟ್ಟು-25
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ
ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಈ ಪ್ರಕಟಣೆಯ ದಿನಾಂಕದಿಂದ 15
ದಿವಸಗಳು ಅಂದರೆ ಜನವರಿ 16 ಸೋಮವಾರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ವೆಬ್ ಸೈಟ್ ವಿಳಾಸ: “https://rdpr.karnataka.gov.in/rdc/public/” ಸದರಿ ವೆಬ್ಸೈಟ್ನ ಮುಖಪುಟದ
ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು” ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಖುದ್ದಾಗಿ ಇಲ್ಲವೆ ಅಂಚೆ ಮೂಲಕ ಸಲ್ಲಿಸಬಯಸುವವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ,
ಅಂಬೇಡ್ಕರ್ ವೀಧಿ, ಬೆಂಗಳೂರು-560001
ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…