ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100 ಮಂದಿ ಅರ್ಹ ರೈತ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ವಿತರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಬಗರ್ ಹುಕುಂ ಸಮಿತಿ ಸಭೆಯನ್ನು ಕೇವಲ ಕಾಟಚಾರಕ್ಕೆ ಮಾಡುವುದಲ್ಲ, ಸಭೆ ಮಾಡಿದ ಮೇಲೆ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಅರ್ಹ ರೈತರನ್ನ ಗುರುತಿಸುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದೇನೆ ತಿಂಗಳೊಳಗೆ ಸಭೆ ಮಾಡಿ ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.
ಸಾಗುವಳಿ ಚೀಟಿ ಕೊಡಿ..
ಸಾಗುವಳಿ ಚೀಟಿ ನೀಡಿ.. ಜಮೀನಿಗೆ ರಸ್ತೆ ಮಾಡಿಸಿ, ಇ-ಖಾತೆಣ, ಫವತಿ ಖಾತೆ, ಸ್ಮಶಾನಕ್ಕೆ ಜಾಗ ಗುರುತಿಸಿ, ನಿವೇಶನ ಹಂಚಿಕೆ ಮಾಡಲು ಜಮೀನು ಸರ್ವೆ ಮಾಡಿಸಿ.. ದನಕರು ಮೇಯಿಸಲು ಜಮೀನು ಮೀಸಲಿಡಿ.. ಹೀಗೆ ಸಮಸ್ಯೆಗಳ ಸರಮಾಲೆಯನ್ನ ರೈತರು, ಸಾರ್ವಜನಿಕರು ಶಾಸಕರ ಬಳಿ ಮನವಿ ಮಾಡಿದರು.
ಅರ್ಜಿಗಳ ಸ್ವೀಕಾರದ ಬಳಿಕ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಶಾಸಕರ ಲೆಟರ್ ಹೆಡ್ ಮೂಲಕವೂ ರೈತರ ಅರ್ಜಿಗಳನ್ನ ಫಾಲೋಅಪ್ ಮಾಡಲಾಗುವುದು. ಈ ಸಭೆಯಲ್ಲಿಯೇ ಇ-ಆಫೀಸ್ ನಂಬರ್ ಗಳನ್ನು ಸೃಜನೆ ಮಾಡಲಾಗಿದೆ. ಮುಂದಿನ ಕಂದಾಯ ಅದಾಲತ್ ವೇಳೆಗೆ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.
ಗ್ರಾಮಗಳ ಸ್ಮಶಾನ, ಜಮೀನುಗಳಿಗೆ ರಸ್ತೆ ಪ್ರಕರಣಗಳನ್ನು ಶೀಘ್ರವಾಗಿ ಪೂರ್ಣಮಾಡಿ ವರದಿ ನೀಡುವಂತೆ ಸರ್ವೇ ಇಲಾಖೆಗೆ ಸೂಚಿಸಿದರು.
ಸರ್ಕಾರಿ ಜಮೀನು ರಕ್ಷಣೆಗೆ ಸೂಚನೆ:
ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ 162 ರಲ್ಲಿ 7 ಎಕರೆ ಸರ್ಕಾರಿ ಜಮೀನಿಗೆ ಖಾಸಗಿಯವರು ಕಾಂಪೌಂಡ್ ಹಾಕಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ. ಈ ಒತ್ತುವರಿಯನ್ನು ಕೂಡಲೇ ತೆರವು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.
ಸ್ಥಳದಲ್ಲಿಯೇ ಸರ್ವೇಯರ್ ಮಂಜುನಾಥಗೆ ಕರೆ ಮಾಡಿ ಈ ಕ್ಷಣವೇ ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಹಶೀಲ್ದಾರ್ ಒಳಗೊಂಡಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕ್ರಮಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಉಪತಹಶೀಲ್ದಾರ್ ಪ್ರಕಾಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಂದಾಯ ಇಲಾಖಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…