ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100 ಮಂದಿ ಅರ್ಹ ರೈತ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ವಿತರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಬಗರ್ ಹುಕುಂ ಸಮಿತಿ ಸಭೆಯನ್ನು ಕೇವಲ ಕಾಟಚಾರಕ್ಕೆ ಮಾಡುವುದಲ್ಲ, ಸಭೆ ಮಾಡಿದ ಮೇಲೆ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಅರ್ಹ ರೈತರನ್ನ ಗುರುತಿಸುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದೇನೆ ತಿಂಗಳೊಳಗೆ ಸಭೆ ಮಾಡಿ ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.
ಸಾಗುವಳಿ ಚೀಟಿ ಕೊಡಿ..
ಸಾಗುವಳಿ ಚೀಟಿ ನೀಡಿ.. ಜಮೀನಿಗೆ ರಸ್ತೆ ಮಾಡಿಸಿ, ಇ-ಖಾತೆಣ, ಫವತಿ ಖಾತೆ, ಸ್ಮಶಾನಕ್ಕೆ ಜಾಗ ಗುರುತಿಸಿ, ನಿವೇಶನ ಹಂಚಿಕೆ ಮಾಡಲು ಜಮೀನು ಸರ್ವೆ ಮಾಡಿಸಿ.. ದನಕರು ಮೇಯಿಸಲು ಜಮೀನು ಮೀಸಲಿಡಿ.. ಹೀಗೆ ಸಮಸ್ಯೆಗಳ ಸರಮಾಲೆಯನ್ನ ರೈತರು, ಸಾರ್ವಜನಿಕರು ಶಾಸಕರ ಬಳಿ ಮನವಿ ಮಾಡಿದರು.
ಅರ್ಜಿಗಳ ಸ್ವೀಕಾರದ ಬಳಿಕ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಶಾಸಕರ ಲೆಟರ್ ಹೆಡ್ ಮೂಲಕವೂ ರೈತರ ಅರ್ಜಿಗಳನ್ನ ಫಾಲೋಅಪ್ ಮಾಡಲಾಗುವುದು. ಈ ಸಭೆಯಲ್ಲಿಯೇ ಇ-ಆಫೀಸ್ ನಂಬರ್ ಗಳನ್ನು ಸೃಜನೆ ಮಾಡಲಾಗಿದೆ. ಮುಂದಿನ ಕಂದಾಯ ಅದಾಲತ್ ವೇಳೆಗೆ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.
ಗ್ರಾಮಗಳ ಸ್ಮಶಾನ, ಜಮೀನುಗಳಿಗೆ ರಸ್ತೆ ಪ್ರಕರಣಗಳನ್ನು ಶೀಘ್ರವಾಗಿ ಪೂರ್ಣಮಾಡಿ ವರದಿ ನೀಡುವಂತೆ ಸರ್ವೇ ಇಲಾಖೆಗೆ ಸೂಚಿಸಿದರು.
ಸರ್ಕಾರಿ ಜಮೀನು ರಕ್ಷಣೆಗೆ ಸೂಚನೆ:
ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ 162 ರಲ್ಲಿ 7 ಎಕರೆ ಸರ್ಕಾರಿ ಜಮೀನಿಗೆ ಖಾಸಗಿಯವರು ಕಾಂಪೌಂಡ್ ಹಾಕಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ. ಈ ಒತ್ತುವರಿಯನ್ನು ಕೂಡಲೇ ತೆರವು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.
ಸ್ಥಳದಲ್ಲಿಯೇ ಸರ್ವೇಯರ್ ಮಂಜುನಾಥಗೆ ಕರೆ ಮಾಡಿ ಈ ಕ್ಷಣವೇ ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಹಶೀಲ್ದಾರ್ ಒಳಗೊಂಡಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕ್ರಮಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಉಪತಹಶೀಲ್ದಾರ್ ಪ್ರಕಾಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಂದಾಯ ಇಲಾಖಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…