ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100 ಮಂದಿ ಅರ್ಹ ರೈತ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ವಿತರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಬಗರ್ ಹುಕುಂ ಸಮಿತಿ ಸಭೆಯನ್ನು ಕೇವಲ ಕಾಟಚಾರಕ್ಕೆ ಮಾಡುವುದಲ್ಲ, ಸಭೆ ಮಾಡಿದ ಮೇಲೆ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಅರ್ಹ ರೈತರನ್ನ ಗುರುತಿಸುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದೇನೆ ತಿಂಗಳೊಳಗೆ ಸಭೆ ಮಾಡಿ ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.

ಸಾಗುವಳಿ ಚೀಟಿ ಕೊಡಿ..

ಸಾಗುವಳಿ ಚೀಟಿ ನೀಡಿ.. ಜಮೀನಿಗೆ ರಸ್ತೆ ಮಾಡಿಸಿ, ಇ-ಖಾತೆಣ, ಫವತಿ ಖಾತೆ, ಸ್ಮಶಾನಕ್ಕೆ ಜಾಗ ಗುರುತಿಸಿ, ನಿವೇಶನ ಹಂಚಿಕೆ ಮಾಡಲು ಜಮೀನು ಸರ್ವೆ ಮಾಡಿಸಿ.. ದನಕರು ಮೇಯಿಸಲು ಜಮೀನು ಮೀಸಲಿಡಿ.. ಹೀಗೆ ಸಮಸ್ಯೆಗಳ ಸರಮಾಲೆಯನ್ನ ರೈತರು, ಸಾರ್ವಜನಿಕರು ಶಾಸಕರ ಬಳಿ ಮನವಿ ಮಾಡಿದರು.

ಅರ್ಜಿಗಳ ಸ್ವೀಕಾರದ ಬಳಿಕ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಶಾಸಕರ ಲೆಟರ್ ಹೆಡ್ ಮೂಲಕವೂ ರೈತರ ಅರ್ಜಿಗಳನ್ನ ಫಾಲೋಅಪ್ ಮಾಡಲಾಗುವುದು. ಈ ಸಭೆಯಲ್ಲಿಯೇ ಇ-ಆಫೀಸ್ ನಂಬರ್ ಗಳನ್ನು ಸೃಜನೆ  ಮಾಡಲಾಗಿದೆ. ಮುಂದಿನ ಕಂದಾಯ ಅದಾಲತ್ ವೇಳೆಗೆ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.

ಗ್ರಾಮಗಳ ಸ್ಮಶಾನ, ಜಮೀನುಗಳಿಗೆ ರಸ್ತೆ ಪ್ರಕರಣಗಳನ್ನು ಶೀಘ್ರವಾಗಿ ಪೂರ್ಣಮಾಡಿ ವರದಿ ನೀಡುವಂತೆ ಸರ್ವೇ ಇಲಾಖೆಗೆ ಸೂಚಿಸಿದರು.

ಸರ್ಕಾರಿ ಜಮೀನು ರಕ್ಷಣೆಗೆ ಸೂಚನೆ:

ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ 162 ರಲ್ಲಿ 7 ಎಕರೆ ಸರ್ಕಾರಿ ಜಮೀನಿಗೆ ಖಾಸಗಿಯವರು ಕಾಂಪೌಂಡ್ ಹಾಕಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ. ಈ ಒತ್ತುವರಿಯನ್ನು ಕೂಡಲೇ ತೆರವು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಸ್ಥಳದಲ್ಲಿಯೇ ಸರ್ವೇಯರ್ ಮಂಜುನಾಥಗೆ ಕರೆ ಮಾಡಿ ಈ ಕ್ಷಣವೇ ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಹಶೀಲ್ದಾರ್ ಒಳಗೊಂಡಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕ್ರಮಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಉಪತಹಶೀಲ್ದಾರ್ ಪ್ರಕಾಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಂದಾಯ ಇಲಾಖಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago