ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100 ಮಂದಿ ಅರ್ಹ ರೈತ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ವಿತರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಬಗರ್ ಹುಕುಂ ಸಮಿತಿ ಸಭೆಯನ್ನು ಕೇವಲ ಕಾಟಚಾರಕ್ಕೆ ಮಾಡುವುದಲ್ಲ, ಸಭೆ ಮಾಡಿದ ಮೇಲೆ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಅರ್ಹ ರೈತರನ್ನ ಗುರುತಿಸುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದೇನೆ ತಿಂಗಳೊಳಗೆ ಸಭೆ ಮಾಡಿ ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.

ಸಾಗುವಳಿ ಚೀಟಿ ಕೊಡಿ..

ಸಾಗುವಳಿ ಚೀಟಿ ನೀಡಿ.. ಜಮೀನಿಗೆ ರಸ್ತೆ ಮಾಡಿಸಿ, ಇ-ಖಾತೆಣ, ಫವತಿ ಖಾತೆ, ಸ್ಮಶಾನಕ್ಕೆ ಜಾಗ ಗುರುತಿಸಿ, ನಿವೇಶನ ಹಂಚಿಕೆ ಮಾಡಲು ಜಮೀನು ಸರ್ವೆ ಮಾಡಿಸಿ.. ದನಕರು ಮೇಯಿಸಲು ಜಮೀನು ಮೀಸಲಿಡಿ.. ಹೀಗೆ ಸಮಸ್ಯೆಗಳ ಸರಮಾಲೆಯನ್ನ ರೈತರು, ಸಾರ್ವಜನಿಕರು ಶಾಸಕರ ಬಳಿ ಮನವಿ ಮಾಡಿದರು.

ಅರ್ಜಿಗಳ ಸ್ವೀಕಾರದ ಬಳಿಕ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಶಾಸಕರ ಲೆಟರ್ ಹೆಡ್ ಮೂಲಕವೂ ರೈತರ ಅರ್ಜಿಗಳನ್ನ ಫಾಲೋಅಪ್ ಮಾಡಲಾಗುವುದು. ಈ ಸಭೆಯಲ್ಲಿಯೇ ಇ-ಆಫೀಸ್ ನಂಬರ್ ಗಳನ್ನು ಸೃಜನೆ  ಮಾಡಲಾಗಿದೆ. ಮುಂದಿನ ಕಂದಾಯ ಅದಾಲತ್ ವೇಳೆಗೆ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.

ಗ್ರಾಮಗಳ ಸ್ಮಶಾನ, ಜಮೀನುಗಳಿಗೆ ರಸ್ತೆ ಪ್ರಕರಣಗಳನ್ನು ಶೀಘ್ರವಾಗಿ ಪೂರ್ಣಮಾಡಿ ವರದಿ ನೀಡುವಂತೆ ಸರ್ವೇ ಇಲಾಖೆಗೆ ಸೂಚಿಸಿದರು.

ಸರ್ಕಾರಿ ಜಮೀನು ರಕ್ಷಣೆಗೆ ಸೂಚನೆ:

ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ 162 ರಲ್ಲಿ 7 ಎಕರೆ ಸರ್ಕಾರಿ ಜಮೀನಿಗೆ ಖಾಸಗಿಯವರು ಕಾಂಪೌಂಡ್ ಹಾಕಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ. ಈ ಒತ್ತುವರಿಯನ್ನು ಕೂಡಲೇ ತೆರವು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಸ್ಥಳದಲ್ಲಿಯೇ ಸರ್ವೇಯರ್ ಮಂಜುನಾಥಗೆ ಕರೆ ಮಾಡಿ ಈ ಕ್ಷಣವೇ ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಹಶೀಲ್ದಾರ್ ಒಳಗೊಂಡಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕ್ರಮಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಉಪತಹಶೀಲ್ದಾರ್ ಪ್ರಕಾಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಂದಾಯ ಇಲಾಖಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

7 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

8 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

9 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

9 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

10 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

18 hours ago