ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100 ಮಂದಿ ಅರ್ಹ ರೈತ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ವಿತರಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಇಂದು ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾತನಾಡಿದ ಅವರು, ಬಗರ್ ಹುಕುಂ ಸಮಿತಿ ಸಭೆಯನ್ನು ಕೇವಲ ಕಾಟಚಾರಕ್ಕೆ ಮಾಡುವುದಲ್ಲ, ಸಭೆ ಮಾಡಿದ ಮೇಲೆ ರೈತರಿಗೆ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಅರ್ಹ ರೈತರನ್ನ ಗುರುತಿಸುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದೇನೆ ತಿಂಗಳೊಳಗೆ ಸಭೆ ಮಾಡಿ ರೈತರಿಗೆ ಸಾಗುವಳಿ ಚೀಟಿ ವಿತರಿಸಲಾಗುವುದು ಎಂದರು.
ಸಾಗುವಳಿ ಚೀಟಿ ಕೊಡಿ..
ಸಾಗುವಳಿ ಚೀಟಿ ನೀಡಿ.. ಜಮೀನಿಗೆ ರಸ್ತೆ ಮಾಡಿಸಿ, ಇ-ಖಾತೆಣ, ಫವತಿ ಖಾತೆ, ಸ್ಮಶಾನಕ್ಕೆ ಜಾಗ ಗುರುತಿಸಿ, ನಿವೇಶನ ಹಂಚಿಕೆ ಮಾಡಲು ಜಮೀನು ಸರ್ವೆ ಮಾಡಿಸಿ.. ದನಕರು ಮೇಯಿಸಲು ಜಮೀನು ಮೀಸಲಿಡಿ.. ಹೀಗೆ ಸಮಸ್ಯೆಗಳ ಸರಮಾಲೆಯನ್ನ ರೈತರು, ಸಾರ್ವಜನಿಕರು ಶಾಸಕರ ಬಳಿ ಮನವಿ ಮಾಡಿದರು.
ಅರ್ಜಿಗಳ ಸ್ವೀಕಾರದ ಬಳಿಕ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಶಾಸಕರ ಲೆಟರ್ ಹೆಡ್ ಮೂಲಕವೂ ರೈತರ ಅರ್ಜಿಗಳನ್ನ ಫಾಲೋಅಪ್ ಮಾಡಲಾಗುವುದು. ಈ ಸಭೆಯಲ್ಲಿಯೇ ಇ-ಆಫೀಸ್ ನಂಬರ್ ಗಳನ್ನು ಸೃಜನೆ ಮಾಡಲಾಗಿದೆ. ಮುಂದಿನ ಕಂದಾಯ ಅದಾಲತ್ ವೇಳೆಗೆ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.
ಗ್ರಾಮಗಳ ಸ್ಮಶಾನ, ಜಮೀನುಗಳಿಗೆ ರಸ್ತೆ ಪ್ರಕರಣಗಳನ್ನು ಶೀಘ್ರವಾಗಿ ಪೂರ್ಣಮಾಡಿ ವರದಿ ನೀಡುವಂತೆ ಸರ್ವೇ ಇಲಾಖೆಗೆ ಸೂಚಿಸಿದರು.
ಸರ್ಕಾರಿ ಜಮೀನು ರಕ್ಷಣೆಗೆ ಸೂಚನೆ:
ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸರ್ವೇ ನಂಬರ್ 162 ರಲ್ಲಿ 7 ಎಕರೆ ಸರ್ಕಾರಿ ಜಮೀನಿಗೆ ಖಾಸಗಿಯವರು ಕಾಂಪೌಂಡ್ ಹಾಕಿ ಜಮೀನು ಕಬಳಿಸಲು ಯತ್ನಿಸುತ್ತಿದ್ದಾರೆ. ಈ ಒತ್ತುವರಿಯನ್ನು ಕೂಡಲೇ ತೆರವು ಮಾಡಿಸಿಕೊಡಬೇಕು ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.
ಸ್ಥಳದಲ್ಲಿಯೇ ಸರ್ವೇಯರ್ ಮಂಜುನಾಥಗೆ ಕರೆ ಮಾಡಿ ಈ ಕ್ಷಣವೇ ಸ್ಥಳಕ್ಕೆ ತೆರಳಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕು. ಇಲ್ಲವಾದಲ್ಲಿ ತಹಶೀಲ್ದಾರ್ ಒಳಗೊಂಡಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕ್ರಮಜರುಗಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ, ಉಪತಹಶೀಲ್ದಾರ್ ಪ್ರಕಾಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಕಂದಾಯ ಇಲಾಖಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…