Categories: ಕೋಲಾರ

ತಿಂಗಳೊಳಗೆ ಒಪಿಎಸ್ ಜಾರಿಗೆ ಪ್ರಯತ್ನ, ನೌಕರರ ಹಿತವೇ ಸಂಘದ ಗುರಿ -ಸಿ.ಎಸ್ ಷಡಾಕ್ಷರಿ ಭರವಸೆ

ಕೋಲಾರ: ರಾಜ್ಯ ಸರ್ಕಾರದಿಂದ ಮುಂದಿನ ತಿಂಗಳೊಳಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ದು ಮಾಡಿ, ಹಳೇ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೊಳಿಸಲು ಪ್ರಯತ್ನಿಸಲಾಗುತ್ತದೆ ನೌಕರರ ತೊಂದರೆಗೆ ಸಂಘವು ನೈತಿಕ ಶಕ್ತಿ ತುಂಬುವುದು ನಮ್ಮ ಗುರಿಯಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಎರಡನೇ ಬಾರಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೆ ಅಭಿನಂದನೆ ಮತ್ತು ಉತ್ತಮ ಶಿಕ್ಷಕಿಯರಿಗೆ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷವು ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿದ್ದವು. ಆದರೆ, ಆ ಸರಕಾರಗಳು ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್‌ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

ಕಳೆದ ಐದು ವರ್ಷದಲ್ಲಿ ಸುಮಾರು 25 ಆದೇಶಗಳನ್ನು ನೌಕರರ ಪರವಾಗಿ ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿದೆ ಇನ್ನೂ ಎರಡು ಮೂರು ತಿಂಗಳಲ್ಲಿ ನೌಕರರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ವಿಮೆಯೊಂದಿಗೆ ಡಯಾಲಿಸಿಸ್ ಹಾಗೂ ಕ್ಯಾನ್ಸರ್ ಅಂತಹ ಕಾಯಿಲೆಗಳಿಗೆ ಆರು ತಿಂಗಳ ರಜೆಯೊಂದಿಗೆ ಸಂಬಳ ನೀಡುವ ಆದೇಶವನ್ನು ಜಾರಿ ಮಾಡಲಾಗುತ್ತದೆ ಮುಂದಿನ ವರ್ಷ 2026 ರಲ್ಲಿ ಕೇಂದ್ರ ಸರ್ಕಾರದ ವೇತನ ಆಯೋಗದ ಜಾರಿ ರೀತಿಯಲ್ಲಿಯೇ ರಾಜ್ಯದಲ್ಲೂ 8 ನೇ ವೇತನ ಆಯೋಗವನ್ನು ಜಾರಿಗೊಳಿಸಲು ಪ್ರತಿಯೊಬ್ಬ ನೌಕರರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ನೌಕರರ ನಿರಂತರ ಚಟುವಟಿಕೆಗಳಿಗೆ ನೌಕರರ ಭವನಗಳು ಅವಶ್ಯಕತೆ ಇದ್ದು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಮೊದಲ ಅಧ್ಯತೆ ನೀಡಲಾಗುತ್ತದೆ ಅದರಂತೆ ಸರ್ಕಾರದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ತಲಾ 50 ಲಕ್ಷ ಹಾಗೂ ತಾಲ್ಲೂಕು ಕೇಂದ್ರಕ್ಕೆ 25 ಲಕ್ಷ ರೂಗಳನ್ನು ಬಿಡುಗಡೆ ಮಾಡಿಸಲು ಒತ್ತಾಯಿಸಲಾಗುತ್ತದೆ ನೌಕರರ ಸಹಕಾರ ಹಾಗೂ ಸಂಘಟನೆ ಮೂಲಕ ನಮ್ಮ ಎಲ್ಲಾ ಹಕ್ಕುಗಳನ್ನು ಹಾಗೂ ಸೌಲಭ್ಯಗಳನ್ನು ಪಡೆಯಲು ರಾಜ್ಯ ಸರ್ಕಾರಿ ನೌಕರರ ಸಂಘವು ಶತಪ್ರಯತ್ನ ಮಾಡಲಾಗುವುದೆಂದು ಹೇಳಿದರು.

ರಾಜ್ಯ ಸಂಘದ ನೇತೃತ್ವದಲ್ಲಿ ಜಿಲ್ಲಾ ತಾಲೂಕು ಘಟಕದ ವತಿಯಿಂದ ನೌಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದರೆ, ಇನ್ನು ಕೆಲವು ಸಂಘಟನೆಯವರು ಎನ್‌ಪಿಎಸ್‌ ಸಮಸ್ಯೆಯನ್ನು ಜೀವಂತವಾಗಿಟ್ಟು, ಹೋರಾಟದ ಹೆಸರಿನಲ್ಲಿ ದೇಣಿಗೆ ಎತ್ತಬೇಕೆಂಬ ಮನಸ್ಥಿತಿ ಹೊಂದಿದ್ದಾರೆ. ನನ್ನ ಅವಧಿಯಲ್ಲಿ 7ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವುದು ಸೇರಿ ಒಟ್ಟು 25 ಸರಕಾರಿ ಆದೇಶಗಳನ್ನು ನಮ್ಮ ಅವಧಿಯಲ್ಲಿ ಜಾರಿ ಮಾಡಲಾಗಿದೆ ನಾವು ಎಲ್ಲೂ ಸಹ ಒಂದೇ, ಒಂದು ರೂಪಾಯಿ ದೇಣಿಗೆ ಎತ್ತಿಲ್ಲ 6 ಲಕ್ಷ ನೌಕರರಿಗೆ ಒಳ್ಳೆಯದು ಮಾಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ ಅ ಕೆಲಸವನ್ನು ಆಯ್ಕೆಯಾದ ಪ್ರತಿಯೊಬ್ಬ ಪದಾಧಿಕಾರಿಗಳು ನಿರ್ದೇಶಕರು ಮಾಡಬೇಕು ಎಂದರು.

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ರಾಜ್ಯ ಸಂಘವು ನಿರಂತರ ಪ್ರಯತ್ನದಿಂದ ಸುಮಾರು 25 ನೌಕರರ ಸ್ನೇಹಿ ಆದೇಶಗಳನ್ನು ಜಾರಿ ಮಾಡಲಾಗಿದೆ ಮುಂದೆ ಆರೋಗ್ಯ ಸಂಜೀವಿನಿ, ಒಪಿಎಸ್ ಜಾರಿಗೆ ಜಿಲ್ಲಾ ಸಂಘವು ರಾಜ್ಯ ಸಂಘಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಕೋಲಾರ ಜಿಲ್ಲೆಯಲ್ಲಿನ ನೌಕರರ ಭವನಕ್ಕೆ ಅನುದಾನ ಕೊಡಿಸುವ ಜೊತೆಗೆ ಗಡಿನಾಡು ಉತ್ಸವ, ಹಾಗೂ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜ್, ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ, ಖಜಾಂಚಿ ವಿ.ವಿ ಶಿವರುದ್ರಯ್ಯ, ರಾಜ್ಯ ಪರಿಷತ್ ಸದಸ್ಯರಾದ ಶ್ರೀನಿವಾಸರೆಡ್ಡಿ, ಕೆ.ಟಿ.ಸುರೇಶ್ ಬಾಬು, ಚೇತನ್, ಜ್ಞಾನಪ್ರಕಾಶ್, ಶಂಕರಪ್ಪ, ರಾಜೇಶ್, ಜಿಲ್ಲಾ ಖಜಾಂಚಿ ಮುರಳಿಮೋಹನ್, ಕಾರ್ಯದರ್ಶಿ ಸತೀಶ್ ಕುಮಾರ್, ಗೌರವಧ್ಯಕ್ಷ ಕೆ. ಎನ್. ಮಂಜುನಾಥ, ಹಿರಿಯ ಉಪಾಧ್ಯಕ್ಷರಾದ ನಾಗಮಣಿ, ಹರಿಕೃಷ್ಣ, ಡಾ. ತಬಸ್ಸುಮ್, ಕೆ. ವಿಜಯ್, ತಾಲೂಕು ಅಧ್ಯಕ್ಷರಾದ ವಿ.ಮುನೇಗೌಡ, ಕೆ.ಎನ್ ಅರವಿಂದ್, ಆರ್.ರವಿ, ಎಂ.ಬೈರೇಗೌಡ, ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ವೃಂದಸಂಘಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

15 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago