Categories: ಕೋಲಾರ

ತಿಗಳ ಸಮಾಜಕ್ಕೆ ಎಂಎಲ್ ಸಿ ಸ್ಥಾನ ನೀಡುವಂತೆ ಎಲ್.ಎ ಮಂಜುನಾಥ್ ಒತ್ತಾಯ

ಕೋಲಾರ: ಮುಂದಿನ ಜೂನ್ ತಿಂಗಳಲ್ಲಿ ರಾಜ್ಯ ವಿಧಾನ ಪರಿಷತ್ತಿನಲ್ಲಿ ತಮ್ಮ ಅವಧಿ ಮುಕ್ತಾಯವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯ ತಿಗಳ ಸಮುದಾಯವನ್ನು ಪರಿಗಣಿಸುವಂತೆ ರಾಜ್ಯ ಸರಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ ಸಂಯೋಜಕ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಒತ್ತಾಯಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಪಕ್ಷ ಎಂದರೆ ಅದು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವಂತ ಪಕ್ಷವಾಗಿದೆ. ರಾಜ್ಯದಲ್ಲಿ ತಿಗಳ ಸಮುದಾಯವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಾಗಿದೆ. ಅದರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಪಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಎಚ್ ಮುನಿಯಪ್ಪ ಹಾಗೂ ಬೈರತಿ ಸುರೇಶ್ ಅವರು ತಿಗಳ ಸಮುದಾಯವನ್ನು ಗುರುತಿಸಿ ಎಂಎಲ್ಸಿ ಸ್ಥಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ರಾಜಕಾರಣದ ದಿಕ್ಕನ್ನು ಬದಲಾಸುವ ಶಕ್ತಿ ತಿಗಳ ಸಮುದಾಯಕ್ಕೆ ಇದ್ದರೂ ಸಹ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದೆ ಬಿದ್ದಿದ್ದೇವೆ. ಸಮಾಜವು ಬೇರೆ ಬೇರೆ ಸಮುದಾಯಗಳಂತೆ ತಿಗಳ ಸಮುದಾಯವು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಸಮುದಾಯದ ಏಳಿಗೆಗಾಗಿ ಸರಕಾರವು ಸಹ ಸ್ಥಾನಮಾನವನ್ನು ನೀಡಬೇಕಾಗಿದೆ. ಸಮಾಜದ ಪ್ರತಿನಿಧಿಯಾಗಿ ಇದ್ದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಅನಿಟ್ಟಿನಲ್ಲಿ ಸರಕಾರ ಮತ್ತು ಕಾಂಗ್ರೆಸ್ ಪಕ್ಷವು ಗಮನ ಹರಿಸಬೇಕಾಗಿದೆ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ತಿಗಳ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿದ್ದ ಸಮುದಾಯ ಮುಖಂಡ ಪಿ.ಆರ್. ರಮೇಶ್ ಅವರನ್ನು ಹಿಂದೆ ಎಂಎಲ್ಸಿ ಮಾಡಲಾಗಿತ್ತು. ಅವರ ಅವಧಿ ಮುಗಿದ ನಂತರ ತಿಗಳ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯವನ್ನು ನೀಡಲಿಲ್ಲ. ರಾಜ್ಯದ 224 ಶಾಸಕರಲ್ಲಿ ಯಾರು ಕೂಡ ಸಮುದಾಯದ ಶಾಸಕರು ಇಲ್ಲ ಜೊತೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಅವಕಾಶವನ್ನು ಮಾಡಿಕೊಟ್ಟಿಲ್ಲ. ಹಾಗಾಗಿ ತಿಗಳ ಸಮುದಾಯವರನ್ನು ಎಂಎಲ್ಸಿ ಮಾಡಬೇಕು ಎಂಬುದು ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಎಲ್.ಎ ಮಂಜುನಾಥ್ ತಿಳಿಸಿದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

11 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

11 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago