Categories: ಕೋಲಾರ

ತಿಗಳ ಸಮಾಜಕ್ಕೆ ಎಂಎಲ್ ಸಿ ಸ್ಥಾನ ನೀಡುವಂತೆ ಎಲ್.ಎ ಮಂಜುನಾಥ್ ಒತ್ತಾಯ

ಕೋಲಾರ: ಮುಂದಿನ ಜೂನ್ ತಿಂಗಳಲ್ಲಿ ರಾಜ್ಯ ವಿಧಾನ ಪರಿಷತ್ತಿನಲ್ಲಿ ತಮ್ಮ ಅವಧಿ ಮುಕ್ತಾಯವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯ ತಿಗಳ ಸಮುದಾಯವನ್ನು ಪರಿಗಣಿಸುವಂತೆ ರಾಜ್ಯ ಸರಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ ಸಂಯೋಜಕ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಒತ್ತಾಯಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಪಕ್ಷ ಎಂದರೆ ಅದು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವಂತ ಪಕ್ಷವಾಗಿದೆ. ರಾಜ್ಯದಲ್ಲಿ ತಿಗಳ ಸಮುದಾಯವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಾಗಿದೆ. ಅದರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಪಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಎಚ್ ಮುನಿಯಪ್ಪ ಹಾಗೂ ಬೈರತಿ ಸುರೇಶ್ ಅವರು ತಿಗಳ ಸಮುದಾಯವನ್ನು ಗುರುತಿಸಿ ಎಂಎಲ್ಸಿ ಸ್ಥಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ರಾಜಕಾರಣದ ದಿಕ್ಕನ್ನು ಬದಲಾಸುವ ಶಕ್ತಿ ತಿಗಳ ಸಮುದಾಯಕ್ಕೆ ಇದ್ದರೂ ಸಹ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದೆ ಬಿದ್ದಿದ್ದೇವೆ. ಸಮಾಜವು ಬೇರೆ ಬೇರೆ ಸಮುದಾಯಗಳಂತೆ ತಿಗಳ ಸಮುದಾಯವು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಸಮುದಾಯದ ಏಳಿಗೆಗಾಗಿ ಸರಕಾರವು ಸಹ ಸ್ಥಾನಮಾನವನ್ನು ನೀಡಬೇಕಾಗಿದೆ. ಸಮಾಜದ ಪ್ರತಿನಿಧಿಯಾಗಿ ಇದ್ದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಅನಿಟ್ಟಿನಲ್ಲಿ ಸರಕಾರ ಮತ್ತು ಕಾಂಗ್ರೆಸ್ ಪಕ್ಷವು ಗಮನ ಹರಿಸಬೇಕಾಗಿದೆ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ತಿಗಳ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿದ್ದ ಸಮುದಾಯ ಮುಖಂಡ ಪಿ.ಆರ್. ರಮೇಶ್ ಅವರನ್ನು ಹಿಂದೆ ಎಂಎಲ್ಸಿ ಮಾಡಲಾಗಿತ್ತು. ಅವರ ಅವಧಿ ಮುಗಿದ ನಂತರ ತಿಗಳ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯವನ್ನು ನೀಡಲಿಲ್ಲ. ರಾಜ್ಯದ 224 ಶಾಸಕರಲ್ಲಿ ಯಾರು ಕೂಡ ಸಮುದಾಯದ ಶಾಸಕರು ಇಲ್ಲ ಜೊತೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಅವಕಾಶವನ್ನು ಮಾಡಿಕೊಟ್ಟಿಲ್ಲ. ಹಾಗಾಗಿ ತಿಗಳ ಸಮುದಾಯವರನ್ನು ಎಂಎಲ್ಸಿ ಮಾಡಬೇಕು ಎಂಬುದು ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಎಲ್.ಎ ಮಂಜುನಾಥ್ ತಿಳಿಸಿದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago