ಕೋಲಾರ: ಮುಂದಿನ ಜೂನ್ ತಿಂಗಳಲ್ಲಿ ರಾಜ್ಯ ವಿಧಾನ ಪರಿಷತ್ತಿನಲ್ಲಿ ತಮ್ಮ ಅವಧಿ ಮುಕ್ತಾಯವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯ ತಿಗಳ ಸಮುದಾಯವನ್ನು ಪರಿಗಣಿಸುವಂತೆ ರಾಜ್ಯ ಸರಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ ಸಂಯೋಜಕ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಒತ್ತಾಯಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಎಂದರೆ ಅದು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವಂತ ಪಕ್ಷವಾಗಿದೆ. ರಾಜ್ಯದಲ್ಲಿ ತಿಗಳ ಸಮುದಾಯವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಾಗಿದೆ. ಅದರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಪಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಎಚ್ ಮುನಿಯಪ್ಪ ಹಾಗೂ ಬೈರತಿ ಸುರೇಶ್ ಅವರು ತಿಗಳ ಸಮುದಾಯವನ್ನು ಗುರುತಿಸಿ ಎಂಎಲ್ಸಿ ಸ್ಥಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ರಾಜಕಾರಣದ ದಿಕ್ಕನ್ನು ಬದಲಾಸುವ ಶಕ್ತಿ ತಿಗಳ ಸಮುದಾಯಕ್ಕೆ ಇದ್ದರೂ ಸಹ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದೆ ಬಿದ್ದಿದ್ದೇವೆ. ಸಮಾಜವು ಬೇರೆ ಬೇರೆ ಸಮುದಾಯಗಳಂತೆ ತಿಗಳ ಸಮುದಾಯವು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಸಮುದಾಯದ ಏಳಿಗೆಗಾಗಿ ಸರಕಾರವು ಸಹ ಸ್ಥಾನಮಾನವನ್ನು ನೀಡಬೇಕಾಗಿದೆ. ಸಮಾಜದ ಪ್ರತಿನಿಧಿಯಾಗಿ ಇದ್ದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಅನಿಟ್ಟಿನಲ್ಲಿ ಸರಕಾರ ಮತ್ತು ಕಾಂಗ್ರೆಸ್ ಪಕ್ಷವು ಗಮನ ಹರಿಸಬೇಕಾಗಿದೆ ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ತಿಗಳ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿದ್ದ ಸಮುದಾಯ ಮುಖಂಡ ಪಿ.ಆರ್. ರಮೇಶ್ ಅವರನ್ನು ಹಿಂದೆ ಎಂಎಲ್ಸಿ ಮಾಡಲಾಗಿತ್ತು. ಅವರ ಅವಧಿ ಮುಗಿದ ನಂತರ ತಿಗಳ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯವನ್ನು ನೀಡಲಿಲ್ಲ. ರಾಜ್ಯದ 224 ಶಾಸಕರಲ್ಲಿ ಯಾರು ಕೂಡ ಸಮುದಾಯದ ಶಾಸಕರು ಇಲ್ಲ ಜೊತೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಅವಕಾಶವನ್ನು ಮಾಡಿಕೊಟ್ಟಿಲ್ಲ. ಹಾಗಾಗಿ ತಿಗಳ ಸಮುದಾಯವರನ್ನು ಎಂಎಲ್ಸಿ ಮಾಡಬೇಕು ಎಂಬುದು ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಎಲ್.ಎ ಮಂಜುನಾಥ್ ತಿಳಿಸಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…