ಕೋಲಾರ: ಮುಂದಿನ ಜೂನ್ ತಿಂಗಳಲ್ಲಿ ರಾಜ್ಯ ವಿಧಾನ ಪರಿಷತ್ತಿನಲ್ಲಿ ತಮ್ಮ ಅವಧಿ ಮುಕ್ತಾಯವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯ ತಿಗಳ ಸಮುದಾಯವನ್ನು ಪರಿಗಣಿಸುವಂತೆ ರಾಜ್ಯ ಸರಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ ಸಂಯೋಜಕ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್ ಒತ್ತಾಯಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಎಂದರೆ ಅದು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವಂತ ಪಕ್ಷವಾಗಿದೆ. ರಾಜ್ಯದಲ್ಲಿ ತಿಗಳ ಸಮುದಾಯವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಾಗಿದೆ. ಅದರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಪಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಎಚ್ ಮುನಿಯಪ್ಪ ಹಾಗೂ ಬೈರತಿ ಸುರೇಶ್ ಅವರು ತಿಗಳ ಸಮುದಾಯವನ್ನು ಗುರುತಿಸಿ ಎಂಎಲ್ಸಿ ಸ್ಥಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ರಾಜಕಾರಣದ ದಿಕ್ಕನ್ನು ಬದಲಾಸುವ ಶಕ್ತಿ ತಿಗಳ ಸಮುದಾಯಕ್ಕೆ ಇದ್ದರೂ ಸಹ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದೆ ಬಿದ್ದಿದ್ದೇವೆ. ಸಮಾಜವು ಬೇರೆ ಬೇರೆ ಸಮುದಾಯಗಳಂತೆ ತಿಗಳ ಸಮುದಾಯವು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಸಮುದಾಯದ ಏಳಿಗೆಗಾಗಿ ಸರಕಾರವು ಸಹ ಸ್ಥಾನಮಾನವನ್ನು ನೀಡಬೇಕಾಗಿದೆ. ಸಮಾಜದ ಪ್ರತಿನಿಧಿಯಾಗಿ ಇದ್ದಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಅನಿಟ್ಟಿನಲ್ಲಿ ಸರಕಾರ ಮತ್ತು ಕಾಂಗ್ರೆಸ್ ಪಕ್ಷವು ಗಮನ ಹರಿಸಬೇಕಾಗಿದೆ ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ತಿಗಳ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿದ್ದ ಸಮುದಾಯ ಮುಖಂಡ ಪಿ.ಆರ್. ರಮೇಶ್ ಅವರನ್ನು ಹಿಂದೆ ಎಂಎಲ್ಸಿ ಮಾಡಲಾಗಿತ್ತು. ಅವರ ಅವಧಿ ಮುಗಿದ ನಂತರ ತಿಗಳ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯವನ್ನು ನೀಡಲಿಲ್ಲ. ರಾಜ್ಯದ 224 ಶಾಸಕರಲ್ಲಿ ಯಾರು ಕೂಡ ಸಮುದಾಯದ ಶಾಸಕರು ಇಲ್ಲ ಜೊತೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಅವಕಾಶವನ್ನು ಮಾಡಿಕೊಟ್ಟಿಲ್ಲ. ಹಾಗಾಗಿ ತಿಗಳ ಸಮುದಾಯವರನ್ನು ಎಂಎಲ್ಸಿ ಮಾಡಬೇಕು ಎಂಬುದು ನಮ್ಮೆಲ್ಲರ ಒತ್ತಾಯವಾಗಿದೆ ಎಂದು ಎಲ್.ಎ ಮಂಜುನಾಥ್ ತಿಳಿಸಿದರು.
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…