Categories: ಕೋಲಾರ

ತಿಗಳ ಸಮುದಾಯದ ಎಲ್.ಎ.ಮಂಜುನಾಥ್ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಭೇಟಿ, ಚರ್ಚೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರು ಶನಿವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ತಿಗಳ ಸಮುದಾಯದ ಪ್ರಭಾವಿ ಮುಖಂಡ ಎಲ್.ಎ ಮಂಜುನಾಥ್ ಮನೆಗೆ ಭೇಟಿ ನೀಡಿ ವಹ್ನಿಕುಲ ಕ್ಷತ್ರಿಯ ಜನಾಂಗದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ತಿಗಳ ಸಮುದಾಯದ ಮುಖಂಡರು ಮಾತನಾಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1.30 ಲಕ್ಷದಷ್ಟು ಮತದಾರರು ಇದ್ದರೂ ಸಹ ರಾಜಕೀಯವಾಗಿ ಯಾವುದೇ ಸ್ಥಾನಮಾನಗಳನ್ನು ನೀಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುತ್ತೇವೆ. ಆದರೆ, ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜಕೀಯ ಸ್ಥಾನಮಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಲ್.ಎ ಮಂಜುನಾಥ್ ಮಾತನಾಡಿ, 2023 ರಲ್ಲಿ ಕೋಲಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಹೇಳಿದ್ದರು ಅದರಂತೆ ನಾನು ಸಹ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿದ್ದೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಸ್ಪರ್ಧೆ ಅಂತ ಹೇಳಿ ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡಲಿಲ್ಲ. ನನಗೂ ಕೂಡ ಅವಕಾಶ ವಂಚಿತರಾಗಿ ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿ ಜನಾಂಗ ಪ್ರತಿನಿಧಿಯಾಗಿ ಇದ್ದ ಒಬ್ಬರೇ ಒಬ್ಬ ಎಂಎಲ್ಸಿಯನ್ನು ಸಹ ಕಿತ್ತುಕೊಂಡಿದ್ದಾರೆ ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಸರಕಾರ ಮತ್ತು ಪಕ್ಷದೊಂದಿಗೆ ಮಾತನಾಡಬೇಕು ಎಂದು ಒತ್ತಾಯಿಸಿದರು

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಅನಿವಾರ್ಯ ಕಾರಣದಿಂದ ಹೈಕಮಾಂಡ್ ಕಾಂಗ್ರೆಸ್ ಟಿಕೆಟ್ ನನ್ನಂತಹ ನಿಷ್ಠಾವಂತ ಸಾಮಾನ್ಯ ವ್ಯಕ್ತಿಗೆ ನೀಡಿದೆ. ಯಾವುದೇ ಸಮುದಾಯವನ್ನು ಗುರುತಿಸಿಕೊಳ್ಳಲು ಒಗ್ಗಟ್ಟಿನಿಂದ ಗಟ್ಟಿ ದ್ವನಿಯಾಗಬೇಕು. ಪಕ್ಷವು ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಿ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಲಿದ್ದು, ನಿಮ್ಮ ಮನೆ ಮಗನ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಬೆನೊಟೊ, ತಿಗಳ ಸಮುದಾಯದ ಮುಖಂಡರಾದ ಫಾಲ್ಗುಣ, ಆನಂದಕುಮಾರ್, ರಾಮಮೂರ್ತಿ, ರಂಗನಾಥ್, ನಾಗರಾಜ್, ಸುಭಾಕರ್, ಚಿನ್ನಪ್ಪ,ಬಾಬು, ಮುನೇಂದ್ರ, ಮಂಜುನಾಥ್, ರಾಜೇಂದ್ರ ಪ್ರಸಾದ್, ಮುನಿರಾಜು, ರಘು, ಶ್ರೀನಿವಾಸ್, ಗೋಪಾಲ್, ಜಯರಾಮ್, ಶ್ರೀರಾಮ್, ಮೂರ್ತಿ, ಮುಂತಾದವರು ಇದ್ದರು

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago