Categories: ಕೋಲಾರ

ತಿಗಳ ಸಮುದಾಯದ ಎಲ್.ಎ.ಮಂಜುನಾಥ್ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಭೇಟಿ, ಚರ್ಚೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರು ಶನಿವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ತಿಗಳ ಸಮುದಾಯದ ಪ್ರಭಾವಿ ಮುಖಂಡ ಎಲ್.ಎ ಮಂಜುನಾಥ್ ಮನೆಗೆ ಭೇಟಿ ನೀಡಿ ವಹ್ನಿಕುಲ ಕ್ಷತ್ರಿಯ ಜನಾಂಗದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ತಿಗಳ ಸಮುದಾಯದ ಮುಖಂಡರು ಮಾತನಾಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1.30 ಲಕ್ಷದಷ್ಟು ಮತದಾರರು ಇದ್ದರೂ ಸಹ ರಾಜಕೀಯವಾಗಿ ಯಾವುದೇ ಸ್ಥಾನಮಾನಗಳನ್ನು ನೀಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುತ್ತೇವೆ. ಆದರೆ, ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜಕೀಯ ಸ್ಥಾನಮಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಲ್.ಎ ಮಂಜುನಾಥ್ ಮಾತನಾಡಿ, 2023 ರಲ್ಲಿ ಕೋಲಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಹೇಳಿದ್ದರು ಅದರಂತೆ ನಾನು ಸಹ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿದ್ದೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಸ್ಪರ್ಧೆ ಅಂತ ಹೇಳಿ ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡಲಿಲ್ಲ. ನನಗೂ ಕೂಡ ಅವಕಾಶ ವಂಚಿತರಾಗಿ ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿ ಜನಾಂಗ ಪ್ರತಿನಿಧಿಯಾಗಿ ಇದ್ದ ಒಬ್ಬರೇ ಒಬ್ಬ ಎಂಎಲ್ಸಿಯನ್ನು ಸಹ ಕಿತ್ತುಕೊಂಡಿದ್ದಾರೆ ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಸರಕಾರ ಮತ್ತು ಪಕ್ಷದೊಂದಿಗೆ ಮಾತನಾಡಬೇಕು ಎಂದು ಒತ್ತಾಯಿಸಿದರು

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಅನಿವಾರ್ಯ ಕಾರಣದಿಂದ ಹೈಕಮಾಂಡ್ ಕಾಂಗ್ರೆಸ್ ಟಿಕೆಟ್ ನನ್ನಂತಹ ನಿಷ್ಠಾವಂತ ಸಾಮಾನ್ಯ ವ್ಯಕ್ತಿಗೆ ನೀಡಿದೆ. ಯಾವುದೇ ಸಮುದಾಯವನ್ನು ಗುರುತಿಸಿಕೊಳ್ಳಲು ಒಗ್ಗಟ್ಟಿನಿಂದ ಗಟ್ಟಿ ದ್ವನಿಯಾಗಬೇಕು. ಪಕ್ಷವು ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಿ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಲಿದ್ದು, ನಿಮ್ಮ ಮನೆ ಮಗನ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಬೆನೊಟೊ, ತಿಗಳ ಸಮುದಾಯದ ಮುಖಂಡರಾದ ಫಾಲ್ಗುಣ, ಆನಂದಕುಮಾರ್, ರಾಮಮೂರ್ತಿ, ರಂಗನಾಥ್, ನಾಗರಾಜ್, ಸುಭಾಕರ್, ಚಿನ್ನಪ್ಪ,ಬಾಬು, ಮುನೇಂದ್ರ, ಮಂಜುನಾಥ್, ರಾಜೇಂದ್ರ ಪ್ರಸಾದ್, ಮುನಿರಾಜು, ರಘು, ಶ್ರೀನಿವಾಸ್, ಗೋಪಾಲ್, ಜಯರಾಮ್, ಶ್ರೀರಾಮ್, ಮೂರ್ತಿ, ಮುಂತಾದವರು ಇದ್ದರು

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

52 minutes ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

3 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

7 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago