Categories: ಕೋಲಾರ

ತಿಗಳ ಸಮುದಾಯದ ಎಲ್.ಎ.ಮಂಜುನಾಥ್ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಭೇಟಿ, ಚರ್ಚೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರು ಶನಿವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ತಿಗಳ ಸಮುದಾಯದ ಪ್ರಭಾವಿ ಮುಖಂಡ ಎಲ್.ಎ ಮಂಜುನಾಥ್ ಮನೆಗೆ ಭೇಟಿ ನೀಡಿ ವಹ್ನಿಕುಲ ಕ್ಷತ್ರಿಯ ಜನಾಂಗದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ತಿಗಳ ಸಮುದಾಯದ ಮುಖಂಡರು ಮಾತನಾಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1.30 ಲಕ್ಷದಷ್ಟು ಮತದಾರರು ಇದ್ದರೂ ಸಹ ರಾಜಕೀಯವಾಗಿ ಯಾವುದೇ ಸ್ಥಾನಮಾನಗಳನ್ನು ನೀಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುತ್ತೇವೆ. ಆದರೆ, ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜಕೀಯ ಸ್ಥಾನಮಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಲ್.ಎ ಮಂಜುನಾಥ್ ಮಾತನಾಡಿ, 2023 ರಲ್ಲಿ ಕೋಲಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಹೇಳಿದ್ದರು ಅದರಂತೆ ನಾನು ಸಹ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿದ್ದೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಸ್ಪರ್ಧೆ ಅಂತ ಹೇಳಿ ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡಲಿಲ್ಲ. ನನಗೂ ಕೂಡ ಅವಕಾಶ ವಂಚಿತರಾಗಿ ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿ ಜನಾಂಗ ಪ್ರತಿನಿಧಿಯಾಗಿ ಇದ್ದ ಒಬ್ಬರೇ ಒಬ್ಬ ಎಂಎಲ್ಸಿಯನ್ನು ಸಹ ಕಿತ್ತುಕೊಂಡಿದ್ದಾರೆ ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಸರಕಾರ ಮತ್ತು ಪಕ್ಷದೊಂದಿಗೆ ಮಾತನಾಡಬೇಕು ಎಂದು ಒತ್ತಾಯಿಸಿದರು

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಅನಿವಾರ್ಯ ಕಾರಣದಿಂದ ಹೈಕಮಾಂಡ್ ಕಾಂಗ್ರೆಸ್ ಟಿಕೆಟ್ ನನ್ನಂತಹ ನಿಷ್ಠಾವಂತ ಸಾಮಾನ್ಯ ವ್ಯಕ್ತಿಗೆ ನೀಡಿದೆ. ಯಾವುದೇ ಸಮುದಾಯವನ್ನು ಗುರುತಿಸಿಕೊಳ್ಳಲು ಒಗ್ಗಟ್ಟಿನಿಂದ ಗಟ್ಟಿ ದ್ವನಿಯಾಗಬೇಕು. ಪಕ್ಷವು ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಿ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಲಿದ್ದು, ನಿಮ್ಮ ಮನೆ ಮಗನ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಬೆನೊಟೊ, ತಿಗಳ ಸಮುದಾಯದ ಮುಖಂಡರಾದ ಫಾಲ್ಗುಣ, ಆನಂದಕುಮಾರ್, ರಾಮಮೂರ್ತಿ, ರಂಗನಾಥ್, ನಾಗರಾಜ್, ಸುಭಾಕರ್, ಚಿನ್ನಪ್ಪ,ಬಾಬು, ಮುನೇಂದ್ರ, ಮಂಜುನಾಥ್, ರಾಜೇಂದ್ರ ಪ್ರಸಾದ್, ಮುನಿರಾಜು, ರಘು, ಶ್ರೀನಿವಾಸ್, ಗೋಪಾಲ್, ಜಯರಾಮ್, ಶ್ರೀರಾಮ್, ಮೂರ್ತಿ, ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago