Categories: ಕೋಲಾರ

ತಿಗಳ ಸಮುದಾಯದ ಎಲ್.ಎ.ಮಂಜುನಾಥ್ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಭೇಟಿ, ಚರ್ಚೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರು ಶನಿವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ತಿಗಳ ಸಮುದಾಯದ ಪ್ರಭಾವಿ ಮುಖಂಡ ಎಲ್.ಎ ಮಂಜುನಾಥ್ ಮನೆಗೆ ಭೇಟಿ ನೀಡಿ ವಹ್ನಿಕುಲ ಕ್ಷತ್ರಿಯ ಜನಾಂಗದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ತಿಗಳ ಸಮುದಾಯದ ಮುಖಂಡರು ಮಾತನಾಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1.30 ಲಕ್ಷದಷ್ಟು ಮತದಾರರು ಇದ್ದರೂ ಸಹ ರಾಜಕೀಯವಾಗಿ ಯಾವುದೇ ಸ್ಥಾನಮಾನಗಳನ್ನು ನೀಡುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುತ್ತೇವೆ. ಆದರೆ, ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜಕೀಯ ಸ್ಥಾನಮಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಲ್.ಎ ಮಂಜುನಾಥ್ ಮಾತನಾಡಿ, 2023 ರಲ್ಲಿ ಕೋಲಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಹೇಳಿದ್ದರು ಅದರಂತೆ ನಾನು ಸಹ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿದ್ದೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಸ್ಪರ್ಧೆ ಅಂತ ಹೇಳಿ ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡಲಿಲ್ಲ. ನನಗೂ ಕೂಡ ಅವಕಾಶ ವಂಚಿತರಾಗಿ ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿ ಜನಾಂಗ ಪ್ರತಿನಿಧಿಯಾಗಿ ಇದ್ದ ಒಬ್ಬರೇ ಒಬ್ಬ ಎಂಎಲ್ಸಿಯನ್ನು ಸಹ ಕಿತ್ತುಕೊಂಡಿದ್ದಾರೆ ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಸರಕಾರ ಮತ್ತು ಪಕ್ಷದೊಂದಿಗೆ ಮಾತನಾಡಬೇಕು ಎಂದು ಒತ್ತಾಯಿಸಿದರು

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ, ಅನಿವಾರ್ಯ ಕಾರಣದಿಂದ ಹೈಕಮಾಂಡ್ ಕಾಂಗ್ರೆಸ್ ಟಿಕೆಟ್ ನನ್ನಂತಹ ನಿಷ್ಠಾವಂತ ಸಾಮಾನ್ಯ ವ್ಯಕ್ತಿಗೆ ನೀಡಿದೆ. ಯಾವುದೇ ಸಮುದಾಯವನ್ನು ಗುರುತಿಸಿಕೊಳ್ಳಲು ಒಗ್ಗಟ್ಟಿನಿಂದ ಗಟ್ಟಿ ದ್ವನಿಯಾಗಬೇಕು. ಪಕ್ಷವು ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಿ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಲಿದ್ದು, ನಿಮ್ಮ ಮನೆ ಮಗನ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಬೆನೊಟೊ, ತಿಗಳ ಸಮುದಾಯದ ಮುಖಂಡರಾದ ಫಾಲ್ಗುಣ, ಆನಂದಕುಮಾರ್, ರಾಮಮೂರ್ತಿ, ರಂಗನಾಥ್, ನಾಗರಾಜ್, ಸುಭಾಕರ್, ಚಿನ್ನಪ್ಪ,ಬಾಬು, ಮುನೇಂದ್ರ, ಮಂಜುನಾಥ್, ರಾಜೇಂದ್ರ ಪ್ರಸಾದ್, ಮುನಿರಾಜು, ರಘು, ಶ್ರೀನಿವಾಸ್, ಗೋಪಾಲ್, ಜಯರಾಮ್, ಶ್ರೀರಾಮ್, ಮೂರ್ತಿ, ಮುಂತಾದವರು ಇದ್ದರು

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

17 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago