ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ತಿಮ್ಮರಾಜು(ರಾಜು), ಉಪಾಧ್ಯಕ್ಷರಾಗಿ ವಿನೋಧಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ತಿಮ್ಮರಾಜು(ರಾಜು) ಹಾಗೂ ವಿನೋಧಮ್ಮ ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ರಾಮಚಂದ್ರ ನಾಯ್ಕ್ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.
ಅಭಿನಂದನೆ ಸ್ವೀಕರಿಸಿ ವಿಎಸ್ಎಸ್ ಎನ್ ನೂತನ ಅಧ್ಯಕ್ಷ ತಿಮ್ಮರಾಜು(ರಾಜು) ಮಾತನಾಡಿ, ಪಹಣಿಗಳ ಆಧಾರದ ಮೇಲೆ ಲೋನ್ ನೀಡಲಾಗುವುದು. ಪಡಿತರ ಕೇಂದ್ರ ಪ್ರಾರಂಭಿಸಲು ನಿರ್ಧಾರ ಮಾಡಿದ್ದೇವೆ. ರೈತರ ಅಭಿವೃದ್ಧಿಗೆ ಸದಾ ಬದ್ಧರಾಗಿರುತ್ತೇವೆ ಎಂದರು..
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ರಾಮಚಂದ್ರ ನಾಯ್ಕ್ , ವಸಂತ್ ಕುಮಾರ್, ಕಾಮರಾಜು, ತೂಬಗೆರೆ ಹೋಬಳಿ ಕಾಂಗ್ರೆಸ್ ಉಪಾಧ್ಯಕ್ಷ ನರಸಿಂಹಮೂರ್ತಿ, ನಾರಾಯಣ್(ಜಗ), ಸುಬ್ರಮಣಿ, ನರಸಿಂಹಮೂರ್ತಿ (ಮೂರ್ತಿ) ಇತರರು ಇದ್ದರು.
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…