ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಸಂಘದ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ, 13 ನಿರ್ದೇಶಕರುಗಳ ಸ್ಥಾನಗಳಲ್ಲಿ 8 ಸ್ಥಾನ ಪಡೆದ ಮೈತ್ರಿಕೂಟ ಅಧಿಕಾರವನ್ನ ಹಿಡಿದಿದೆ.
ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತಕ್ಕೆ ಭಾನುವಾರದಂದ್ದು ಚುನಾವಣೆ ನಡೆದಿದ್ದು, 13 ಸ್ಥಾನಗಳ ನಿರ್ದೇಶಕರ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮೈತ್ರಿಯೊಂದಿಗೆ ಸ್ಪರ್ಧಿಸಿದ್ದರು.
ಪರಿಶಿಷ್ಟ ಜಾತಿ ಕೋಟದಲ್ಲಿ ಸ್ಪರ್ಧಿಸಿದ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 12 ಸ್ಥಾನಗಳಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಲ್ಲಿ ರಾಜಣ್ಣ.ಟಿ, ಟಿ.ಆರ್.ನಟರಾಜ್, ಅಶೋಕ್, ಅಂಬರೀಶ್, ಲೋಕೇಶ್, ಟಿ.ಡಿ.ಆನಂದ್, ಕೃಷ್ಣಮೂರ್ತಿ, ಮಹಿಳಾ ಮೀಸಲು ಸ್ಥಾನದಲ್ಲಿ ಅನಸೂಯಮ್ಮ, ರತ್ನಮ್ಮ, ಹಿಂದುಳಿದ ವರ್ಗ ಎ ಸ್ಥಾನದಲ್ಲಿ ಕುಮಾರ್ ಎಂ, ಹಿಂದುಳಿದ ವರ್ಗ ಬಿ ಸ್ಥಾನದಲ್ಲಿ ಪಿ.ರಾಜಣ್ಣ, ಪರಿಶಿಷ್ಟ ಪಂಗಡ ಕೋಟಾದಲ್ಲಿ ಗಂಗಾಧರ್ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ವಿಚೇತರಾದ ನಿರ್ದೇಶಕರನ್ನ ಅಭಿನಂದಿಸಲಾಗಿತು, ಈ ವೇಳೆ ತಿಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚನ್ನರಾಮಯ್ಯ, ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹಯ್ಯ, ಹನುಮಂತಪ್ಪ, ಮಾಜಿ ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ಟಿ.ಡಿ.ಮುನಿಯಪ್ಪ, ಮಾಜಿ ಗ್ರಾಮ ಪಂಚಯತ್ ಸದ್ಯಸರಾದ ಸಂತೋಷ್. ಬಿಜೆಪಿ ಮುಖಂಡರಾದ ಸೂರ್ಯನಾರಾಯಣಗೌಡ, ಗ್ರಾಮದ ಮುಖಂಡರಾದ ಸಿದ್ದಪ್ಪ, ಅರೇಹನುಮಯ್ಯ, ನರೇಂದ್ರ, ಖುಷ್ ಕುಮಾರ್ ಇದ್ದರು.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…